September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!