September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya
error: Content is protected !!