25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!