23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು. ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!