ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Leave a Comment

error: Content is protected !!