23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

Suddi Udaya

ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ‌ಆನ್ಲೈನ್ ನಲ್ಲಿ ವಿಚಾರಸಂಕಿರಣ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya
error: Content is protected !!