September 6, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!