23.6 C
ಪುತ್ತೂರು, ಬೆಳ್ತಂಗಡಿ
April 12, 2025
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!