July 23, 2026
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya
error: Content is protected !!