ಉಜಿರೆ :.ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ ಜೂ. 20: ವಿದ್ಯಾರ್ಥಿಗಳ ಕ್ರೀಡೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಉಜಿರೆ ಕಾಲೇಜಿನ ಪ್ರಾಂಶುಪಾಲರು ಡಾ.ಬಿ ಎ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.
ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸ್ವಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ, ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಎಸ್‌ ಡಿ ಎಂ ಸೆಕೆಂಡರಿ ಶಾಲೆ ಮುಖ್ಯೋಪಾಧ್ಯಾಯ ಸುರೇಶ್ ಹಾಗೂ ಎಸ್ ಡಿ ಎಮ್ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕ್ರೀಡಾ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೆರವೇರಿತು. ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾ ಸಾಧಕರಿಗೆ ಪ್ರೋತ್ಸಾಹ ಧನ ನೀಡಿ ಸಹಕರಿಸಿದರು.
ಕ್ರೀಡಾ ವಿಭಾಗದ ತರಬೇತುದಾರರಾದ ಶಾರದ, ಸುದೀನ, ಸಂದೇಶ್ ಪೂoಜ, ನಿತಿನ್, ಮೇಘನಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

error: Content is protected !!