September 6, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!