23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ:ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!