July 23, 2026
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪ್ರಸನ್ನ ಪದವಿ ಪೂರ್ವ, ಎ. ಎ ಅಕಾಡೆಮಿ ಕಾಲೇಜಿನಲ್ಲಿ “ಕುಕ್ಕಿಂಗ್ ವಿದೌಟ್ ಪೈಯರ್” ಕಾರ್ಯಕ್ರಮ

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!