September 6, 2026
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya
error: Content is protected !!