ಶಾಲಾ ಕಾಲೇಜು

ಸಹಾಯಕ ಪ್ರಾಧ್ಯಾಪಕರಾಗಳು ವಿದ್ಯಾ ಮಾತಾ ಅಕಾಡೆಮಿಯಿಂದ ಆನ್ಲೈನ್ ತರಬೇತಿ

ಪುತ್ತೂರು: ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಅನೇಕ ಯುವ ಸ್ಪರ್ಧಾರ್ಥಿಗಳು ವಿವಿಧ ನೇಮಕಾತಿಗಳಲ್ಲಿ ಆಯ್ಕೆಯಾಗಲು ಕಾರಣಕರ್ತರಾದ ವಿದ್ಯಾಮಾತಾ ಅಕಾಡೆಮಿಯು ಇದೀಗ 2024ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ಯ ಪೂರ್ವ ತಯಾರಿ ತರಬೇತಿಯನ್ನು ಆನ್ಲೈನ್ ಮೂಲಕ ನಡೆಸಲಿದ್ದು ಈ ಸಂಬಂಧ ತಕ್ಷಣದಿಂದಲೇ ಅನ್ವಯವಾಗುವಂತೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ತರಬೇತಿ ತರಗತಿಗಳು ರಾತ್ರಿ 7 ರಿಂದ 9ರ ಅವಧಿಯಲ್ಲಿ ವಿಷಯಾನುಸಾರವಾಗಿ ನಡೆಯಲಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ಬಯಸುವವರು , ಪೂರ್ವಭಾವಿಯಾಗಿ ತರಬೇತಿಯನ್ನು ಪಡೆಯಬಯಸುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ ತಮ್ಮ ದಾಖಲಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
2023ನೇ ಸಾಲಿನ ಕೆಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ವಿದ್ಯಾಮಾತಾ ಅಕಾಡೆಮಿಯು ಈ ಸಾಲಿನ ಪರೀಕ್ಷೆಯಲ್ಲೂ ಸಾಧನೆಯನ್ನು ಮರುಕಳಿಸುವ ಇರಾದೆಯಲ್ಲಿದೆ.

ಯಾವ ರೀತಿ ನಡೆಯಲಿದೆ ಕೆಸೆಟ್ ಪರೀಕ್ಷೆ…

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22 -2024
  • ಸ್ನಾತಕೋತ್ತರ ಪದವಿದರರು ಹಾಗೂ ಸದ್ಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಪರೀಕ್ಷಾ ದಿನಾಂಕ ನವಂಬರ್ 24 -2024
  • ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
  • 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ.
  • ಕೆಸೆಟ್ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳು
    ಮಂಗಳೂರು, ಮೈಸೂರು, ಶಿವಮೊಗ್ಗ, ಬೆಂಗಳೂರು, ಧಾರವಾಡ, ಕಲ್ಬುರ್ಗಿ, ವಿಜಯಪುರ, ಬಳ್ಳಾರಿ, ತುಮಕೂರು, ದಾವಣಗೆರೆ,ಬೆಳಗಾವಿ.
    ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ, ಆಧಾರ್ ಕಾರ್ಡ್, ಅಂಕಪಟ್ಟಿಗಳು,ಜಾತಿ ಪ್ರಮಾಣ ಪತ್ರ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ
    ಕೇಂದ್ರ ಕಛೇರಿ ಪುತ್ತೂರು ,
    PH: 9148935808, 96204 68869.

ಸುಳ್ಯ ಶಾಖೆ
PH: 9448527606.

ಕಾರ್ಕಳ ಶಾಖೆ
PH 8310484380, 9740564044.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya
error: Content is protected !!