July 23, 2026
ಶಾಲಾ ಕಾಲೇಜು

ಸಹಾಯಕ ಪ್ರಾಧ್ಯಾಪಕರಾಗಳು ವಿದ್ಯಾ ಮಾತಾ ಅಕಾಡೆಮಿಯಿಂದ ಆನ್ಲೈನ್ ತರಬೇತಿ

ಪುತ್ತೂರು: ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಅನೇಕ ಯುವ ಸ್ಪರ್ಧಾರ್ಥಿಗಳು ವಿವಿಧ ನೇಮಕಾತಿಗಳಲ್ಲಿ ಆಯ್ಕೆಯಾಗಲು ಕಾರಣಕರ್ತರಾದ ವಿದ್ಯಾಮಾತಾ ಅಕಾಡೆಮಿಯು ಇದೀಗ 2024ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ಯ ಪೂರ್ವ ತಯಾರಿ ತರಬೇತಿಯನ್ನು ಆನ್ಲೈನ್ ಮೂಲಕ ನಡೆಸಲಿದ್ದು ಈ ಸಂಬಂಧ ತಕ್ಷಣದಿಂದಲೇ ಅನ್ವಯವಾಗುವಂತೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ತರಬೇತಿ ತರಗತಿಗಳು ರಾತ್ರಿ 7 ರಿಂದ 9ರ ಅವಧಿಯಲ್ಲಿ ವಿಷಯಾನುಸಾರವಾಗಿ ನಡೆಯಲಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ಬಯಸುವವರು , ಪೂರ್ವಭಾವಿಯಾಗಿ ತರಬೇತಿಯನ್ನು ಪಡೆಯಬಯಸುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ ತಮ್ಮ ದಾಖಲಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
2023ನೇ ಸಾಲಿನ ಕೆಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ವಿದ್ಯಾಮಾತಾ ಅಕಾಡೆಮಿಯು ಈ ಸಾಲಿನ ಪರೀಕ್ಷೆಯಲ್ಲೂ ಸಾಧನೆಯನ್ನು ಮರುಕಳಿಸುವ ಇರಾದೆಯಲ್ಲಿದೆ.

ಯಾವ ರೀತಿ ನಡೆಯಲಿದೆ ಕೆಸೆಟ್ ಪರೀಕ್ಷೆ…

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22 -2024
  • ಸ್ನಾತಕೋತ್ತರ ಪದವಿದರರು ಹಾಗೂ ಸದ್ಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಪರೀಕ್ಷಾ ದಿನಾಂಕ ನವಂಬರ್ 24 -2024
  • ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
  • 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ.
  • ಕೆಸೆಟ್ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳು
    ಮಂಗಳೂರು, ಮೈಸೂರು, ಶಿವಮೊಗ್ಗ, ಬೆಂಗಳೂರು, ಧಾರವಾಡ, ಕಲ್ಬುರ್ಗಿ, ವಿಜಯಪುರ, ಬಳ್ಳಾರಿ, ತುಮಕೂರು, ದಾವಣಗೆರೆ,ಬೆಳಗಾವಿ.
    ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ, ಆಧಾರ್ ಕಾರ್ಡ್, ಅಂಕಪಟ್ಟಿಗಳು,ಜಾತಿ ಪ್ರಮಾಣ ಪತ್ರ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ
    ಕೇಂದ್ರ ಕಛೇರಿ ಪುತ್ತೂರು ,
    PH: 9148935808, 96204 68869.

ಸುಳ್ಯ ಶಾಖೆ
PH: 9448527606.

ಕಾರ್ಕಳ ಶಾಖೆ
PH 8310484380, 9740564044.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ 619 ಅಂಕ,ರಾಜ್ಯಕ್ಕೆ 7ನೇ ರ್ಯಾಂಕ್

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya
error: Content is protected !!