April 2, 2025
ಪೊಲೀಸ್ಪ್ರಮುಖ ಸುದ್ದಿ

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಹಾಗೂ ಮರದ ದಿಮ್ಮಿ ವಶಪಡಿಸಿಕೊಂಡಿದೆ.

ಸುಳ್ಯ ತಾಲೂಕು ಅಲೆಟ್ಟಿ ನಿವಾಸಿ ನಿಖಿಲ್ ನಿಖಿಲ್ ಸಂಗಮ್(26ವ.)ಬಂಧಿತ ಲಾರಿ ಚಾಲಕ. ಈತ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಲಾರಿಯೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮಂಗಳೂರು ಕಡೆಗೆ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪತ್ತೆಹಚ್ಚಿದೆ. ಲಾರಿ ಹಾಗೂ ಸುಮಾರು 23 ಕಲ್ಬಾಗೆ ಮರದ ದಿಮ್ಮಿ ವಶಪಡಿಸಿಕೊಂಡಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಆರ್‌ಎಫ್‌ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್‌ಒ ಭವಾನಿಶಂಕರ್, ಫಾರೆಸ್ಟರ್ ವಿನಯ್‌ಚಂದ್ರ, ತೇಜಕುಮಾರ್ ಹಾಗೂ ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya
error: Content is protected !!