September 6, 2026
ಪೊಲೀಸ್ಪ್ರಮುಖ ಸುದ್ದಿ

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಹಾಗೂ ಮರದ ದಿಮ್ಮಿ ವಶಪಡಿಸಿಕೊಂಡಿದೆ.

ಸುಳ್ಯ ತಾಲೂಕು ಅಲೆಟ್ಟಿ ನಿವಾಸಿ ನಿಖಿಲ್ ನಿಖಿಲ್ ಸಂಗಮ್(26ವ.)ಬಂಧಿತ ಲಾರಿ ಚಾಲಕ. ಈತ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಲಾರಿಯೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮಂಗಳೂರು ಕಡೆಗೆ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪತ್ತೆಹಚ್ಚಿದೆ. ಲಾರಿ ಹಾಗೂ ಸುಮಾರು 23 ಕಲ್ಬಾಗೆ ಮರದ ದಿಮ್ಮಿ ವಶಪಡಿಸಿಕೊಂಡಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಆರ್‌ಎಫ್‌ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್‌ಒ ಭವಾನಿಶಂಕರ್, ಫಾರೆಸ್ಟರ್ ವಿನಯ್‌ಚಂದ್ರ, ತೇಜಕುಮಾರ್ ಹಾಗೂ ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya
error: Content is protected !!