24 C
ಪುತ್ತೂರು, ಬೆಳ್ತಂಗಡಿ
June 8, 2026
ಪೊಲೀಸ್ಪ್ರಮುಖ ಸುದ್ದಿ

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಹಾಗೂ ಮರದ ದಿಮ್ಮಿ ವಶಪಡಿಸಿಕೊಂಡಿದೆ.

ಸುಳ್ಯ ತಾಲೂಕು ಅಲೆಟ್ಟಿ ನಿವಾಸಿ ನಿಖಿಲ್ ನಿಖಿಲ್ ಸಂಗಮ್(26ವ.)ಬಂಧಿತ ಲಾರಿ ಚಾಲಕ. ಈತ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಲಾರಿಯೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮಂಗಳೂರು ಕಡೆಗೆ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪತ್ತೆಹಚ್ಚಿದೆ. ಲಾರಿ ಹಾಗೂ ಸುಮಾರು 23 ಕಲ್ಬಾಗೆ ಮರದ ದಿಮ್ಮಿ ವಶಪಡಿಸಿಕೊಂಡಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಆರ್‌ಎಫ್‌ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್‌ಒ ಭವಾನಿಶಂಕರ್, ಫಾರೆಸ್ಟರ್ ವಿನಯ್‌ಚಂದ್ರ, ತೇಜಕುಮಾರ್ ಹಾಗೂ ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಉಜಿರೆ: ಜೈವಿಕ ತಂತ್ರಜ್ಞಾನ ವಿಭಾಗದಿಂದ ಎಐ ಆಧಾರಿತ ಕಲಿಕೆಯ ಕುರಿತು ಕಾರ್ಯಾಗಾರ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!