23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya
error: Content is protected !!