22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya
error: Content is protected !!