23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!