25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ವೇಣೂರು :ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ವೇಣೂರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ವನ್ನು ವೇಣೂರು ವಲಯದಲ್ಲಿ ಆಯೋಜಿಸಲಾಯಿತು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್ ಕಾರ್ಯಕ್ರಮಗಳನ್ನ ಸಂಘಟಿಸುವಲ್ಲಿ ಪದಾಧಿಕಾರಿಗಳ ಪಾತ್ರದ ಕುರಿತು ತರಬೇತಿಯನ್ನ ನೀಡಿದರು
ನಾಯಕತ್ವ ವನ್ನ ವಹಿಸಿ ಕೊಂಡವರು ಸಮಾಜಮುಖಿ ಯಾಗಿ ಕೆಲಸ ಮಾಡಬೇಕು ಪದಾಧಿಕಾರಿಗಳು ಎಲೆಕ್ಷನ್ ಮೂಲಕ ಆಯ್ಕೆಯಾದವರು ಅಲ್ಲ ಬದಲಾಗಿ ಜನರ ಮೂಲಕ ಸೆಲೆಕ್ಷನ್ ಆಯ್ಕೆಯಾಗಿದ್ದಾರೆ ಸ್ವ ಇಚ್ಛೆಯಿಂದ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ನಿಯಮದ ಡಿಯಲ್ಲಿ ಜನರಿಗೆ ಸೇವೆ ನೀಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಶ್ರೀ ಸುರೇಶ್ ಮೊಯ್ಲಿ ಯವರು ಹೇಳಿದರು ಅವರು ನಾಯಕತ್ವ ಹಾಗೂ ಸಂವಹನ ಕುರಿತಾಗಿ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು ನಿಕಟ ಪೂರ್ವ ವಲಯ ಅಧ್ಯಕ್ಷರಾದ ಜಯಶಂಕರ್ ಹೆಗ್ಡೆ ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು
ಒಕ್ಕೂಟ ಸಭೆ ನಡೆಸುವ ವಿಧಾನ ಹಾಗು ಜವಾಬ್ದಾರಿಗಳ ಕುರಿತು ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿಯವರು ತರಬೇತಿ ನೀಡಿದರು ವೇಣೂರು ವಲಯದ ನೂತನ ಒಕ್ಕೂಟದ ವಲಯ ಅಧ್ಯಕ್ಷರಾಗಿ ಬಜಿರೆ ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ರವರು ಆಯ್ಕೆಯಾದರು ವಲಯ ಮೇಲ್ವಿಚಾರಕ ರಾದ ಶ್ರೀಮತಿ ಶಾಲಿನಿ ಕಾರ್ಯಕ್ರಮವನ್ನ ನಿರ್ವಹಿಸಿದರು ಮುಡುಕೊಡಿ ಸೇವಾ ಪ್ರತಿನಿಧಿ ಸುನೀತ ಸ್ವಾಗತಿಸಿದರು

Related posts

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya
error: Content is protected !!