23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!