July 23, 2026
ಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,
ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ಶಾಲೆಯಲ್ಲಿ ಮಳೆ ನೀರಿನ ಕೊಯಿಲು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನೀರು ಪ್ರತಿ ಜೀವ ರಾಶಿಗಳಿಗೂ ಅತ್ಯವಶ್ಯಕ. ಇಂದಿನ‌ ತಂತ್ರಜ್ಞಾನ ಯುಗದಲ್ಲಿ ಅಂತರ್ಜಲದ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು ಜಲ ಸಂರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ. ಮೇಲ್ಛಾವಣಿಯ ಮಳೆ ನೀರನ್ನು ಶುದ್ಧೀಕರಿಸಿ ನೇರವಾಗಿ ಕೊಳವೆ ಬಾವಿಗೆ ಹಾಯಿಸಿ ಅಂತರ್ಜಲವನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಯಿತು. ಸಂಯೋಜಕರಾದ ಶ್ರೀಮತಿ
ವಸಂತಿ, ಶ್ರೀಮತಿ
ಶಕುಂತಲಾ
ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಒಲ್ವಿನ್ ಡಿಸೋಜ, ಹರೀಶ್, ಅರ್ವಿನ್ ಮಿರಾಂದ, ಗೋಪಾಲ್,ಕೇಶವ, ಶೇಕ್ ಹರ್ಷದ್, ಪುರಂದರ,ಎನ್ ಬಿ ಹರಿಶ್ಚಂದ್ರ, ಲೀಲಾ, ವಸಂತಿ, ಸುಲೋಚನಾ, ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಮೋಹನ‌ ಬಾಬು ಡಿ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ್, ಸದಸ್ಯರಾದ ಶ್ರೀ ಧರಣೇಂದ್ರ ಕುಮಾರ್, ಶಿಕ್ಷಕರಾದ ಶ್ರೀ ಶಿವಪುತ್ರ ಸುಣಗಾರ್ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಮತ್ತು ಎಲ್ಲಾ ಸ್ವಯಂ ಸೇವಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya
error: Content is protected !!