30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ : ರಾಜ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಲ್ಯಾಣಕ್ಕಾಗಿ ಮಕ್ಕಳ 2023-24ನೇ ಸಾಲಿನಲ್ಲಿ ವಿನಿಯೋಗಿಸಿರುವ ಅನುದಾನವೆಷ್ಟು, ಹಾಗೂ ಅನುದಾನದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಒದಗಿಸಿರುವ ವಿವಿಧ ಸೌಲಭ್ಯಗಳು ಯಾವುವು; ಪ್ರತಿ ಸೌಲಭ್ಯಕ್ಕೆ ವಿನಿಯೋಗಿಸಿರುವ ಅನುದಾನದ ವಿವರಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಕಾರ್ಮಿಕ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ 2022-23ನೇ ಸಾಲಿನಲ್ಲಿ 9.61 ಲಕ್ಷ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಒಟ್ಟು ರೂ.249.00 ಲಕ್ಷಗಳನ್ನು ವಿನಿಯೋಗಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ..500.00 ಕೋಟಿಗಳನ್ನು ಮಂಡಳಿಯ ಆಯವ್ಯಯದಲ್ಲಿ ಮೀಸಲಿರಿಸಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) (ಕರ್ನಾಟಕ) ನಿಯಮಗಳು 2006 ರ ನಿಯಮ 45 ರನ್ವಯ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ 1ನೇ ತರಗತಿಯಿಂದ ಸ್ನಾತಕ್ಕೋತರ ಪದವಿಯವರೆಗೆ ಧನಸಹಾಯವನ್ನು ನೀಡಲಾಗುವುದು. ಶೈಕ್ಷಣಿಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 2023-24ನೇ ಸಾಲಿಗೆ 2- ಆಡಳಿತ ಇಲಾಖೆಯ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್.ಎಸ್.ಪಿ) ಮೂಲಕ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿಗಳನ್ನು ಮಾರ್ಚ್ 2024 ರಲ್ಲಿ ಆಹ್ವಾನಿಸಲಾಗಿರುತ್ತದೆ. ಆದರೆ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ಸದರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತದೆ. ಕಾರ್ಯವು ಈ ಹಿನ್ನೆಲೆಯಲ್ಲಿ, ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕೊನೆಯ ದಿನಾಂಕವನ್ನು ದಿನಾಂಕ: 31-07-2024 ವಿಸ್ತರಿಸಲಾಗಿರುವುದರಿಂದ, ಶೈಕ್ಷಣಿಕ ಧನಸಹಾಯಕ್ಕೆ ಮೀಸಲಿರಿಸಿದ ಅನುದಾನವನ್ನು ವಿನಿಯೋಗಿಸಲು ರವರೆಗೆ ಸಾಧ್ಯವಾಗಿರುವುದಿಲ್ಲ ಎಂದರು.

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!