July 23, 2026
Uncategorized

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

ಬೆಂಗಳೂರು: ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ಸಲ ಸುರಿದ ಮಳೆಗೆ ಕರಾವಳಿ ಜಿಲ್ಲೆಗಳ ರಸ್ತೆಗಳು ವಾಹನ ಸಂಚರಿಸಲು ಆಗದಷ್ಟು ಹದಗೆಟ್ಟು ಹೋಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ತೀವ್ರ ಅನ್ಯಾಯ ಆಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳು ಅತಿವೃಷ್ಟಿಯಾಗುವ ಜಿಲ್ಲೆಗಳಾಗಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಪ್ಯಾಕೇಜ್ ನೀಡಲಾಗಿದೆ. 371-ಜೆ ಮತ್ತು ನಂಜುಂಡಪ್ಪ ವರದಿ ಪ್ರಕಾರ ಎಲ್ಲಾ ಜಿಲ್ಲೆಗಳನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಜಿಲ್ಲೆಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದು ಸರಕಾರ ಗಮನಹರಿಸಬೇಕು.

ಈ ಕೂಡಲೇ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು

Related posts

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!