23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

ಬೆಂಗಳೂರು: ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ಸಲ ಸುರಿದ ಮಳೆಗೆ ಕರಾವಳಿ ಜಿಲ್ಲೆಗಳ ರಸ್ತೆಗಳು ವಾಹನ ಸಂಚರಿಸಲು ಆಗದಷ್ಟು ಹದಗೆಟ್ಟು ಹೋಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ತೀವ್ರ ಅನ್ಯಾಯ ಆಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳು ಅತಿವೃಷ್ಟಿಯಾಗುವ ಜಿಲ್ಲೆಗಳಾಗಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಪ್ಯಾಕೇಜ್ ನೀಡಲಾಗಿದೆ. 371-ಜೆ ಮತ್ತು ನಂಜುಂಡಪ್ಪ ವರದಿ ಪ್ರಕಾರ ಎಲ್ಲಾ ಜಿಲ್ಲೆಗಳನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಜಿಲ್ಲೆಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದು ಸರಕಾರ ಗಮನಹರಿಸಬೇಕು.

ಈ ಕೂಡಲೇ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!