27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ.


ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ಟ್ರಾನ್ಸ್ಫಾರ್ಮ್ ಕಂಬದಲ್ಲಿ ತಂತಿಯೊಂದು ಅದರ ಉಪಕರಣಗಳು ತುಂಡಾಗಿ ವಿದ್ಯುತ್ ತಂತಿಯು ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ. ವಿದ್ಯುತ್ ಕಂಬದ ಹತ್ತಿರದಲ್ಲಿ ಮನೆಗಳು ಇರುವುದರಿಂದ ಅನಾಹುತ ನಡೆಯುವ ಸಂಭವವಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡಿದರೆ ಅನಾಹುತ ತಪ್ಪಬಹುದು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿದ್ದಾರೆ.

Related posts

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya
error: Content is protected !!