23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ.


ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ಟ್ರಾನ್ಸ್ಫಾರ್ಮ್ ಕಂಬದಲ್ಲಿ ತಂತಿಯೊಂದು ಅದರ ಉಪಕರಣಗಳು ತುಂಡಾಗಿ ವಿದ್ಯುತ್ ತಂತಿಯು ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ. ವಿದ್ಯುತ್ ಕಂಬದ ಹತ್ತಿರದಲ್ಲಿ ಮನೆಗಳು ಇರುವುದರಿಂದ ಅನಾಹುತ ನಡೆಯುವ ಸಂಭವವಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡಿದರೆ ಅನಾಹುತ ತಪ್ಪಬಹುದು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿದ್ದಾರೆ.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya
error: Content is protected !!