25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!