April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ , ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ ಜು.22 ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯು ನಡೆಯಿತು.

ಪ್ರತಿಭಟನಾಕಾರರು ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪೃಥ್ವಿಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಾಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ , ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಪ್ರೀತಮ್ ಧರ್ಮಸ್ಥಳ, ಗಿರೀಶ್ ಬಂದಾರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿದ್ದರು.

ವಿನೀತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!