25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya
error: Content is protected !!