23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

ಬೆಂಗಳೂರು: ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ಸಲ ಸುರಿದ ಮಳೆಗೆ ಕರಾವಳಿ ಜಿಲ್ಲೆಗಳ ರಸ್ತೆಗಳು ವಾಹನ ಸಂಚರಿಸಲು ಆಗದಷ್ಟು ಹದಗೆಟ್ಟು ಹೋಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ತೀವ್ರ ಅನ್ಯಾಯ ಆಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳು ಅತಿವೃಷ್ಟಿಯಾಗುವ ಜಿಲ್ಲೆಗಳಾಗಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಪ್ಯಾಕೇಜ್ ನೀಡಲಾಗಿದೆ. 371-ಜೆ ಮತ್ತು ನಂಜುಂಡಪ್ಪ ವರದಿ ಪ್ರಕಾರ ಎಲ್ಲಾ ಜಿಲ್ಲೆಗಳನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಜಿಲ್ಲೆಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದು ಸರಕಾರ ಗಮನಹರಿಸಬೇಕು.

ಈ ಕೂಡಲೇ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು

Related posts

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya
error: Content is protected !!