July 23, 2026
Uncategorized

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

ಬೆಂಗಳೂರು: ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ಸಲ ಸುರಿದ ಮಳೆಗೆ ಕರಾವಳಿ ಜಿಲ್ಲೆಗಳ ರಸ್ತೆಗಳು ವಾಹನ ಸಂಚರಿಸಲು ಆಗದಷ್ಟು ಹದಗೆಟ್ಟು ಹೋಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ತೀವ್ರ ಅನ್ಯಾಯ ಆಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳು ಅತಿವೃಷ್ಟಿಯಾಗುವ ಜಿಲ್ಲೆಗಳಾಗಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಪ್ಯಾಕೇಜ್ ನೀಡಲಾಗಿದೆ. 371-ಜೆ ಮತ್ತು ನಂಜುಂಡಪ್ಪ ವರದಿ ಪ್ರಕಾರ ಎಲ್ಲಾ ಜಿಲ್ಲೆಗಳನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಜಿಲ್ಲೆಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದು ಸರಕಾರ ಗಮನಹರಿಸಬೇಕು.

ಈ ಕೂಡಲೇ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya
error: Content is protected !!