24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya
error: Content is protected !!