25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮಹಾಸಭೆಯು ಗಣೇಶೋತ್ಸವ ಸಮಿತಿಯ ಹಿಂದಿನ ಅಧ್ಯಕ್ಷ ವಿನಯ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಹಾಗೂ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.


ಗೌರವ ಅಧ್ಯಕ್ಷರಾಗಿ ವಿನಯ ಕೆ, ಅಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಜೆ, ಉಪಾಧ್ಯಕ್ಷರಾಗಿ ಯಶವಂತ ಗೌಡ ಪುರ್ಯಳ ಮತ್ತು ಹೇಮಂತಗೌಡ ನಾಗನೊಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾರಾಮಣ್ಣ ಗೌಡ, ಕಾರ್ಯದರ್ಶಿಗಳಾಗಿ ನಾರಾಯಣ ನಾಯ್ಕ್ ಪುಂಡೈದಡಿ ಮತ್ತು ದಿನೇಶ್ ಗೌಡ ಜಾಲ್ನಪು ಸಲಹೆಗರರಾಗಿ ವಿಜಯ್ ಕುಮಾರ್ ಎಮ್ ಸಮೃದ್ಧಿ ನಿಲಯ, ಕ್ರೀಡಾ ಸಮಿತಿ ಸಂಚಾಲಕರಾಗಿ ದಾಮೋದರ ಗೌಡ ಬೆರ್ಕೆ ಮತ್ತು ಶ್ರೀಮತಿ ಪೂರ್ಣಿಮಾ ಹೇಮಂತಗೌಡ ಜಂಕಿನಡ್ಕ, ಅಲಂಕಾರ ಸಮಿತಿಯ ಸಂಚಾಲಕರಾಗಿ ದಯಾನಂದ ಆಚಾರ್ಯ ಆದರ್ಶ ನಗರ, ಧಾರ್ಮಿಕ ಸಮಿತಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷ ಮತ್ತು ಮಹಿಳಾ ಮಂಡಳಿಯ ಸರ್ವ ಸದಸ್ಯರು, ಆಹ್ವಾನಿತ ಭಜನಾ ಮಂಡಳಿಗಳ ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಆದರ್ಶ ನಗರ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕರಾಗಿ ಶೇಖರ ಗೌಡ ಕೋರಿಯಾರು, ಸಹ ಸಂಚಾಲಕರಾಗಿ ಕುಶಾಲಪ್ಪ ನಾಯ್ಕ ಕುಕ್ಕುದಡಿ, ಅನ್ನದಾನ ಸಮಿತಿಯ ಸಂಚಾಲಕರಾಗಿ ರಮೇಶ್ ಗೌಡ ಮೈಂದಕೋಡಿ, ನಾರಾಯಣ ಗೌಡ ನಾಗನೋಡಿ ಹಾಗೂ ಹರ್ಮಾಡಿ ಬಳಗ ಮತ್ತು ಇನ್ನಿತರ ಸಮಿತಿಗಳನ್ನು ರಚಿಸಲಾಯಿತು.


ನಾರಾಯಣ ನಾಯ್ಕ ಸ್ವಾಗತಿಸಿ , ಗೀತಾರಾಮಣ್ಣ ಗೌಡ ವಂದಿಸಿದರು.

Related posts

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

Suddi Udaya
error: Content is protected !!