April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ.


ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ಟ್ರಾನ್ಸ್ಫಾರ್ಮ್ ಕಂಬದಲ್ಲಿ ತಂತಿಯೊಂದು ಅದರ ಉಪಕರಣಗಳು ತುಂಡಾಗಿ ವಿದ್ಯುತ್ ತಂತಿಯು ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ. ವಿದ್ಯುತ್ ಕಂಬದ ಹತ್ತಿರದಲ್ಲಿ ಮನೆಗಳು ಇರುವುದರಿಂದ ಅನಾಹುತ ನಡೆಯುವ ಸಂಭವವಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡಿದರೆ ಅನಾಹುತ ತಪ್ಪಬಹುದು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya
error: Content is protected !!