July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ.


ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ಟ್ರಾನ್ಸ್ಫಾರ್ಮ್ ಕಂಬದಲ್ಲಿ ತಂತಿಯೊಂದು ಅದರ ಉಪಕರಣಗಳು ತುಂಡಾಗಿ ವಿದ್ಯುತ್ ತಂತಿಯು ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ. ವಿದ್ಯುತ್ ಕಂಬದ ಹತ್ತಿರದಲ್ಲಿ ಮನೆಗಳು ಇರುವುದರಿಂದ ಅನಾಹುತ ನಡೆಯುವ ಸಂಭವವಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡಿದರೆ ಅನಾಹುತ ತಪ್ಪಬಹುದು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿದ್ದಾರೆ.

Related posts

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!