38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya
error: Content is protected !!