July 23, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!