25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya
error: Content is protected !!