23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ , ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ ಜು.22 ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯು ನಡೆಯಿತು.

ಪ್ರತಿಭಟನಾಕಾರರು ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪೃಥ್ವಿಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಾಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ , ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಪ್ರೀತಮ್ ಧರ್ಮಸ್ಥಳ, ಗಿರೀಶ್ ಬಂದಾರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿದ್ದರು.

ವಿನೀತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!