July 23, 2026
Uncategorized

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ : ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, “ಅನ್ನಭಾಗ್ಯ ಯೋಜನೆ” ಯ ಅನುಷ್ಠಾನಕ್ಕೆ ಪದೇಪದೇ ತಾಂತ್ರಿಕ ಅಂಶಗಳು ಕಾರಣಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವ ಕೆ.ಎಸ್ ಮುನಿಯಪ್ಪ ರವರು ಅನ್ನಭಾಗ್ಯ DBT ಯೋಜನೆಗೆ ಸಂಬಂಧಿಸಿದಂತೆ ಮೇ – 2024 ರ ಮಾಹೆಯವರೆವಿಗೂ ಅರ್ಹ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿಸಲಾಗಿರುತ್ತದೆ. ಹಾಗೂ ಜೂನ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಪ್ರಗತಿಯಲ್ಲಿರುತ್ತದೆ. K2 ಮತ್ತು DBT ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ತಂದ ಹಿನ್ನೆಲೆಯಲ್ಲಿ ಏಪ್ರಿಲ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಸ್ವಲ್ಪ ವಿಳಂಬವಾಗಿರುತ್ತದೆ. ನಂತರ DBT ಹಣ ವರ್ಗಾವಣೆ ಕಾರ್ಯದಲ್ಲಿ ಅಡ್ಡಿ ಯಾಗಿರುವುದಿಲ್ಲ ಎಂದು ಉತ್ತರಿಸದಿರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya
error: Content is protected !!