23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭೆಯು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರುಗಳಾದ ಚಂದ್ರಶೇಖರ ಕಾಂಜಾನು ಹಾಗೂ ವಿಜಯ ಕೆ ಹೊಡಿಕ್ಕಾರು ಇವರ ಜಂಟಿ ಅಧ್ಯಕ್ಷತೆಯಲ್ಲಿ ಜು.21 ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.

25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಅಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬೆಳ್ಳೂರು ಗುತ್ತು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಡಾಕ್ಟರ್ ಪ್ರದೀಪ್ ನಾವೂರು, ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಮೋರ್ತಾಜೆ, ಸತೀಶ್ ಗೌಡ ಬೆದ್ರಬೆಟ್ಟು, ಕೆ.ಮೋಹನ್ ಬಂಗೇರ ಕಾರಿಂಜ, ರಮೇಶ್ ಕೆಂಗಾಜೆ, ಕೆ.ಧರ್ಣಪ್ಪ ಮೂಲ್ಯ ನಾವೂರು, ಮಂಜುನಾಥ ಗೌಡ ಹೆಬ್ಬಾರಪಲ್ಕೆ, ಪಳನಿ ಸ್ವಾಮಿ ಪಿ.ಆರ್. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಗೌಡ ನಾವೂರು, ಕಾರ್ಯದರ್ಶಿಗಳಾಗಿ ಪಿ.ವಿನೋದ್ ಪ್ರಸಾದ್ ಕಲ್ಲಾಜೆ, ಶ್ರೀಧರ ಮುಗೇರ ನೇತ್ರಾವತಿ ನಗರ, ಹರೀಶ್ ಬಂಗೇರ ನಾವೂರು, ಶಶಿಧರ ಗೌಡ ಪಡೆಂಕ್ಕಲ್, ಕೋಶಾಧಿಕಾರಿಯಾಗಿ ಸಂತೋಷ್ ಎಂ ಬೆದ್ರಬೆಟ್ಟು ಹಾಗೂ ವಿವಿಧ ಉಪ ಸಮಿತಿಗಳಿಗೆ ಸಂಚಾಲಕರು, ಸಹ ಸಂಚಾಲಕರು, ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ವಿಜ್ರಂಭಣೆಯ 25ನೇ ವರ್ಷದ ಗಣೇಶೋತ್ಸವ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು. ಪ್ರದೀಪ್ ನಾಗಾಜೆ ಸ್ವಾಗತಿಸಿ, ಪಿ.ವಿನೋದ್ ಪ್ರಸಾದ್ ಕಲ್ಲಾಜೆ ಧನ್ಯವಾದವಿತ್ತರು.

Related posts

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya
error: Content is protected !!