25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭೆಯು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರುಗಳಾದ ಚಂದ್ರಶೇಖರ ಕಾಂಜಾನು ಹಾಗೂ ವಿಜಯ ಕೆ ಹೊಡಿಕ್ಕಾರು ಇವರ ಜಂಟಿ ಅಧ್ಯಕ್ಷತೆಯಲ್ಲಿ ಜು.21 ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.

25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಅಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬೆಳ್ಳೂರು ಗುತ್ತು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಡಾಕ್ಟರ್ ಪ್ರದೀಪ್ ನಾವೂರು, ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಮೋರ್ತಾಜೆ, ಸತೀಶ್ ಗೌಡ ಬೆದ್ರಬೆಟ್ಟು, ಕೆ.ಮೋಹನ್ ಬಂಗೇರ ಕಾರಿಂಜ, ರಮೇಶ್ ಕೆಂಗಾಜೆ, ಕೆ.ಧರ್ಣಪ್ಪ ಮೂಲ್ಯ ನಾವೂರು, ಮಂಜುನಾಥ ಗೌಡ ಹೆಬ್ಬಾರಪಲ್ಕೆ, ಪಳನಿ ಸ್ವಾಮಿ ಪಿ.ಆರ್. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಗೌಡ ನಾವೂರು, ಕಾರ್ಯದರ್ಶಿಗಳಾಗಿ ಪಿ.ವಿನೋದ್ ಪ್ರಸಾದ್ ಕಲ್ಲಾಜೆ, ಶ್ರೀಧರ ಮುಗೇರ ನೇತ್ರಾವತಿ ನಗರ, ಹರೀಶ್ ಬಂಗೇರ ನಾವೂರು, ಶಶಿಧರ ಗೌಡ ಪಡೆಂಕ್ಕಲ್, ಕೋಶಾಧಿಕಾರಿಯಾಗಿ ಸಂತೋಷ್ ಎಂ ಬೆದ್ರಬೆಟ್ಟು ಹಾಗೂ ವಿವಿಧ ಉಪ ಸಮಿತಿಗಳಿಗೆ ಸಂಚಾಲಕರು, ಸಹ ಸಂಚಾಲಕರು, ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ವಿಜ್ರಂಭಣೆಯ 25ನೇ ವರ್ಷದ ಗಣೇಶೋತ್ಸವ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು. ಪ್ರದೀಪ್ ನಾಗಾಜೆ ಸ್ವಾಗತಿಸಿ, ಪಿ.ವಿನೋದ್ ಪ್ರಸಾದ್ ಕಲ್ಲಾಜೆ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya
error: Content is protected !!