22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಶಶಿಶೇಖರ್ ಎನ್ ಕಾಕತ್ಕರ್ ಮಾತನಾಡುತ್ತಾ ಶಿಷ್ಯರನ್ನು ಅಂಧಕಾರದಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದೆಡೆಗೆ ತರುವವನೇ ನಿಜವಾದ ಗುರು. ಗುರು ಅಥವಾ ಶಿಕ್ಷಕ ಎಂಬುದು ಅತ್ಯಂತ ಪವಿತ್ರವಾದ ವೃತ್ತ. ಗುರುವು ಪಠ್ಯದ ಜೊತೆಗೆ ಸ್ಥೈರ್ಯ, ಧೈರ್ಯ, ನಿಷ್ಠೆ, ಶ್ರದ್ಧೆ, ಸತ್ಯ, ಧರ್ಮಗಳ ಬೋಧನೆಯೊಂದಿಗೆ ಶಿಷ್ಯರ ಭವಿಷ್ಯದ ರೂವಾರಿಯಾಗಬೇಕು ಎಂದು ಗುರುಪೂರ್ಣಿಮಾದ ಮಹತ್ವವನ್ನು ತಿಳಿಸಿದರು.


ಭಾರತವು ಗುರುಪರಂಪರೆಯನ್ನು ಹೊಂದಿರುವ ರಾಷ್ಟ್ರ, ಗುರು ಎಂಬುವುದು ಅತ್ಯಂತ ಅರ್ಥಪೂರ್ಣ ವೃತ್ತಿ. ಗುರು ಎಂಬುವವನು ಶಿಕ್ಷಕರಿಗೆ ಅಥವಾ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ಹಾಗಾದರೆ ಮಾತ್ರ ಗುರುಪೂರ್ಣಿಮೆ ದಿನವು ಅರ್ಥಪೂರ್ಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಆದ್ಯ ಅತಿಥಿಗಳನ್ನು ಪರಿಚಯಿಸಿ, ಪ್ರೀತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!