July 23, 2026
Uncategorized

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

ಉಜಿರೆ : ಭಾರತದಲ್ಲಿ ಅನಾದಿಕಾಲದಿಂದಲೂ ಗುರುಶಿಷ್ಯ ಪರಂಪರೆ ನಡೆದು ಬಂದಿದೆ; ಈ ಪರಂಪರೆಯಿಂದಲೇ ನಮ್ಮ ರಾಷ್ಟ್ರವು ಇಂದಿಗೂ ವೈಭವಸಂಪನ್ನವಾಗಿದೆ. ಈ ಪರಂಪರೆಯು ಸಮಾಜಕ್ಕೆ ಅಧ್ಯಾತ್ಮದ ಜ್ಞಾನವನ್ನು ನೀಡುವುದರೊಂದಿಗೆ ಸುಸಂಸ್ಕೃತ ಆಚರಣೆಗಳನ್ನೂ ಕಲಿಸಿದೆ. ನಮ್ಮ ಆಚಾರ, ವಿಚಾರ, ಉಡುಪು, ವರ್ತನೆ ಇವೆಲ್ಲವೂ ಸುಸಂಸ್ಕೃತವಾಗಿರಲು ನಾವು ಪ್ರಯತ್ನಿಸಬೇಕಿದೆ. ಪ್ರಭು ಶ್ರೀರಾಮಚಂದ್ರ ಕೂಡ ತಮ್ಮ ಗುರುಗಳ ಆಶೀರ್ವಾದ ಪಡೆದು ಆದರ್ಶ ರಾಮರಾಜ್ಯದ ಸ್ಥಾಪನೆಯನ್ನು ಮಾಡಿದ್ದರು. ಈಗ ನಾವೂ ಇಂತಹ ಆದರ್ಶ ರಾಜ್ಯದ ಸ್ಥಾಪನೆಗಾಗಿ ಸುಸಂಸ್ಕೃತ ಆಚರಣೆಗಳೊಂದಿಗೆ ಪ್ರತಿದಿನ ಪ್ರಭು ಶ್ರೀರಾಮನಿಗೆ ಪ್ರಾರ್ಥನೆಯನ್ನು ಮಾಡೋಣ ಎಂದು ಸನಾತನ ಸಂಸ್ಥೆಯ ಸೌ. ಮಂಜುಳಾ ಈ ಸಮಯದಲ್ಲಿ ಕರೆ ನೀಡಿದರು.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಗುರುಪೂರ್ಣಿಮಾ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು. ಇದರೊಂದಿಗೆ ಜಿಲ್ಲೆಯ ಮಂಗಳೂರು, ಬಂಟ್ವಾಳದಲ್ಲಿ ಮತ್ತು ದೇಶದಾದ್ಯಂತ 71 ಸ್ಥಳಗಳಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಿತ್ತು. 300 ಕ್ಕೂ ಅಧಿಕ ಜನರು ಈ ಕಾರ್ಯಕ್ರಮದ ಲಾಭ ಪಡೆದರು. ಬೆಳಿಗ್ಗೆ ಶ್ರೀ ವ್ಯಾಸ ಪೂಜೆ ಮತ್ತು ಪರಮಪೂಜ್ಯ ಭಕ್ತರಾಜ ಮಹಾರಾಜರ ಪ್ರತಿಮಾ ಪೂಜೆ ನೆರವೇರಿಸಲಾಯಿತು.

ಗುರುಗಳ ಮಾರ್ಗದರ್ಶನದಿಂದ ಆದರ್ಶ ಸಮಾಜ ನಿರ್ಮಿಸಲು ಸಾಧ್ಯ – ನ್ಯಾಯವಾದಿ ಈಶ್ವರ ಕೊಟ್ಟಾರಿ

ಭಾರತ ಭೂಮಿಯಲ್ಲಿ ಜನ್ಮ ಪಡೆಯಬೇಕಾದರೆ ಪುಣ್ಯ ಮಾಡಿರಬೇಕು. ಹಿಂದೆ ಹೇಗೆ ನಮ್ಮ ದೇಶ ರಾಮ ರಾಜ್ಯವಾಗಿತ್ತು ಆ ಸಮಯದಲ್ಲಿ ಎಲ್ಲಾ ಜನರು ಸುಖಿಗಳಾಗಿದ್ದರು. ನಮ್ಮ ದೇಶ ಈಗ ಭ್ರಷ್ಟಾಚಾರ,ಅನೈತಿಕತೆ, ಮೀಸಲಾತಿ, ಚಳುವಳಿ ಇತ್ಯಾದಿಗಳಿಂದ ಜೀವನ ಕಷ್ಟಕರವಾಗಿದೆ ಎಂದರು.ಆದರೆ ಇವೆಲ್ಲವುಗಳಿಗೆ ನಾವು ವಿರೋಧಿಸದೆ ಹೊಂದಿಕೊಂಡಿದ್ದೇವೆ. ಇವೆಲ್ಲವುಗಳಿಗೆ ಒಂದೇ ಪರಿಹಾರ, ನಾವೆಲ್ಲರೂ ಆದ್ಯಾತ್ಮಿಕ ಸಾಧನೆ ಮಾಡಿ ಇದನ್ನು ಎದುರಿಸಬಹುದು. ಇದಕ್ಕೆ ಗುರುಗಳ ಮಾರ್ಗದರ್ಶನ ಬೇಕು. ಈ ಮಾರ್ಗದರ್ಶನವನ್ನು ಸನಾತನ ಸಂಸ್ಥೆಯು ಸಮಾಜಕ್ಕೆ ಪರಿಪೂರ್ಣವಾಗಿ ನೀಡುತ್ತದೆ. ಅದರ ಲಾಭವನ್ನು ಪಡೆದುಕೊಂಡು ಆದರ್ಶ ಸಮಾಜದ ನಿರ್ಮಾಣ ಮಾಡೋಣ ಎಂದು ಹೇಳಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya
error: Content is protected !!