26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

ಧರ್ಮಸ್ಥಳ : ಗುರುವಾಯನಕೆರೆ ಪ್ರತಿಷ್ಠಿತ ಸಂಸ್ಥೆಯಾಗಿ ರಾಜ್ಯದಲ್ಲಿ ಹೆಸರು ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆ ಚಯರ್ ಮೆನ್ ಸುಮಂತ್ ಕುಮಾರ್ ಜೈನ್ ಇವರಿಗೆ ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ.


ಜು 21 ರಂದು ಧರ್ಮಸ್ಥಳ ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇವರ ಸಹಕಾರದೊಂದಿಗೆ ಅತೀ ಕಡಿಮೆ ಅವಧಿಯಲ್ಲಿ ರಾಜ್ಯದ ಉತ್ತಮ
ಶಿಕ್ಷಣ ಸಂಸ್ಥೆಯಾಗಿ ಹೆಸರು ಪಡೆದ ಸಂಸ್ಥೆ ನಡೆಸುತ್ತಿರುವ ಎಲ್ಲರೊಂದಿಗೆ ಬೆರೆಯುವ ಸಾಂಸ್ಕೃತಿಕವಾಗಿ ಹಾಗೂ ಎಲ್ಲಾ ರಂಗದ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ನಿಸ್ವಾರ್ಥ ಸೇವೆಯ ಭಾವನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಶಿಕ್ಷಣ ಸಂಸ್ಥೆಯ ಪೂರಣ್ ವರ್ಮ, ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ. ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕಿರಣ್ ಶೆಟ್ಟಿ ಬೆಳ್ತಂಗಡಿ, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಶಾರದಾ ಶೆಟ್ಟಿ ಅಳದಂಗಡಿ ರಂಜನ್ ನೆರಿಯ, ಅರುಣ್ ಅಳದಂಗಡಿ ಉಪಸ್ಥಿತರಿದ್ದರು.

Related posts

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!