July 23, 2026
Uncategorized

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

ಧರ್ಮಸ್ಥಳ : ಗುರುವಾಯನಕೆರೆ ಪ್ರತಿಷ್ಠಿತ ಸಂಸ್ಥೆಯಾಗಿ ರಾಜ್ಯದಲ್ಲಿ ಹೆಸರು ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆ ಚಯರ್ ಮೆನ್ ಸುಮಂತ್ ಕುಮಾರ್ ಜೈನ್ ಇವರಿಗೆ ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ.


ಜು 21 ರಂದು ಧರ್ಮಸ್ಥಳ ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇವರ ಸಹಕಾರದೊಂದಿಗೆ ಅತೀ ಕಡಿಮೆ ಅವಧಿಯಲ್ಲಿ ರಾಜ್ಯದ ಉತ್ತಮ
ಶಿಕ್ಷಣ ಸಂಸ್ಥೆಯಾಗಿ ಹೆಸರು ಪಡೆದ ಸಂಸ್ಥೆ ನಡೆಸುತ್ತಿರುವ ಎಲ್ಲರೊಂದಿಗೆ ಬೆರೆಯುವ ಸಾಂಸ್ಕೃತಿಕವಾಗಿ ಹಾಗೂ ಎಲ್ಲಾ ರಂಗದ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ನಿಸ್ವಾರ್ಥ ಸೇವೆಯ ಭಾವನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಶಿಕ್ಷಣ ಸಂಸ್ಥೆಯ ಪೂರಣ್ ವರ್ಮ, ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ. ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕಿರಣ್ ಶೆಟ್ಟಿ ಬೆಳ್ತಂಗಡಿ, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಶಾರದಾ ಶೆಟ್ಟಿ ಅಳದಂಗಡಿ ರಂಜನ್ ನೆರಿಯ, ಅರುಣ್ ಅಳದಂಗಡಿ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!